ಕನ್ನಡ ನಾಡು | Kannada Naadu

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ನೂತನ ಮಾದರಿಯ “ರೈತ ಸಂತೆ” “ಮಾವು ಹಾಗೂ ಹಲಸಿನ ಹಣ್ಣಿನ ಮೇಳ”

23 May, 2025

 

ಬೆಂಗಳೂರು,: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿ.ಕೆ.ವಿ.ಕೆ ಆವರಣದಲ್ಲಿ 2025 ನೇ ಮೇ 24 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನೂತನ ಮಾದರಿಯ “ರೈತ ಸಂತೆ” ಕಾರ್ಯಕ್ರಮದಡಿ ಮಾವು ಹಾಗೂ ಹಲಸಿನ ಹಣ್ಣಿನ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ವಿವಿಧ ರೀತಿಯ ಮಾವಿನ ಹಣ್ಣು, ಹಲಸಿನ ಹಣ್ಣನ್ನು ಸಾರ್ವಜನಿಕರಿಗೆ ತಲುಪಿಸುವ ಹಾಗೂ ಕೃಷಿ ಸಂಬಂಧಿ ವಸ್ತುಗಳಿಗೆ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶವನ್ನು ಹೊಂದಲಾಗಿದೆ. ಅಲ್ಲದೆ, ಕೃಷಿ ಉತ್ಪನ್ನ / ಪರಿಕರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣೆ: ಜೈವಿಕ ಕೀಟನಾಶಕಗಳು, ಗುಣಮಟ್ಟದ ಪದಾರ್ಥಗಳು / ಪರಿಕರಗಳು, ಕರಕುಶಲ ವಸ್ತುಗಳು: ಗವ್ಯೋತ್ಪನ್ನಗಳು, ಅಡಿಕೆ ಉತ್ಪನ್ನಗಳು, ರೇμÉ್ಮ ಕೃಷಿಯ ಉಪ ಉತ್ಪನ್ನಗಳು, ಅಣಬೆ, ಜೇನು ಕೃಷಿ ವಾಣಿಜ್ಯೀಕರಣ ಉತ್ಪನ್ನಗಳು, ಪಶು ಸಂಗೋಪನೆ, ಕೃಷಿ ಪ್ರಕಟಣೆಗಳು, ವಿಶ್ವವಿದ್ಯಾನಿಲಯದ ಬಗ್ಗೆ ಮಾಹಿತಿ, ತಾರಸಿ ಕೈತೋಟ / ನಗರ ತೋಟಗಾರಿಕೆ ಇನ್ನು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ.

ಸಾರ್ವಜನಿಕರು ಮತ್ತು ರೈತರು ಈ ವಿನೂತನ ರೈತ ಸಂತೆಯ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Publisher: ಕನ್ನಡ ನಾಡು | Kannada Naadu

Login to Give your comment
Powered by