ಕನ್ನಡ ನಾಡು | Kannada Naadu

ಜನ ಮೆಚ್ಚುವ ಕೆಲಸದಲ್ಲಿ ತೊಡಗಿಕೊಂಡ ಲೀಲಮ್ಮನ ಮಗ  

07 May, 2024

 
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಪುತ್ರ, ಸ್ಯಾಂಡಲ್‌ವುಡ್‌ ನಟ ವಿನೋದ್‌ ರಾಜ್‌ ಅವರು ಬಿರು ಬಿಸಿಲಿನಲ್ಲೂ ತಮ್ಮ ಸಮಾಜಮುಖಿ ಕೆಲಸಗಳನ್ನು ಮುಂದುವರಿಸಿದ್ದಾರೆ.  ನಿತ್ಯವು ಸಮಾಜದ ಜೊತೆಯಲ್ಲಿಯೇ ಇದ್ದು ಸಮಾಜಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಸಹಾಯ ಮಾಡುತ್ತಿರುವ ವಿನೋದ್‌ ರಾಜ್‌ ಈಗ ಮತ್ತೋಮ್ಮೆ ಸುದ್ದಿಯಲ್ಲಿರುತ್ತಾರೆ.
                  ಸಮಾಜಮುಖಿ ಕಾರ್ಯ ಹಾಗೂ ದಾನ- ಧರ್ಮಗಳಲ್ಲಿ ಸದಾ ಮುಂದಿರುವ ವಿನೋದ್‌ ರಾಜ್‌ ಅವರು ಇದೀಗ ಇನ್ನೊಂದು ಜನ ಮೆಚ್ಚುವ ಕಾರ್ಯವನ್ನು ಮಾಡಿದ್ದಾರೆ.  ಸ್ಯಾಂಡಲ್​​ವುಡ್ ನಟ ವಿನೋದ್ ರಾಜ್ ಅವರು ಬೆಂಗಳೂರು ನಗರದ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದಾರೆ. 

             ಸರ್ಕಾರದ ಯಾವುದೇ ಅನುದಾನಕ್ಕೆ ಕಾಯದೇ ವಿನೋದ್‌ ರಾಜ್‌ ತಾವೇ ಸ್ವತಃ ನಿಂತು ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ರಿಪೇರಿ ಕೆಲಸ ಮಾಡಿಸಿದ್ದಾರೆ.  ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೂ ಗುಂಡಿ ಬಿದ್ದ ರಸ್ತೆ ಹಾಗೂ ಕೆಟ್ಟು ಹೋದ ರಸ್ತೆಗಳನ್ನು ಸರಿ ಪಡಿಸಿದ್ದಾರೆ. ಈ ಮೂಲಕ ಮಳೆಗಾಲ ಆರಂಭವಾಗುವ ಮೊದಲೇ ವಿನೋದ್ ರಾಜ್ ರಸ್ತೆಯನ್ನು ರಿಪೇರಿ ಮಾಡಿಸಿದ್ದಾರೆ. ಒಮ್ಮೆ ಮಳೆಗಾಲ ಆರಂಭವಾಗಿ ಜೋರಾಗಿ ಮಳೆ ಶುರುವಾದರೆ, ರಸ್ತೆಗಳು ಮತ್ತಷ್ಟು ಕೆಟ್ಟು ಹೋಗಲಿದ್ದು, ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ಅಲ್ಲದೇ ರಸ್ತೆಗಳು ಕೆಸರು ಮಯವಾಗುತ್ತದೆ. ಇದರಿಂದ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುವ ಸಾಧ್ಯತೆಗಳು ಇದ್ದವು. 
            ವಿನೋದ್ ರಾಜ್ ಈ ಸುಡು ಬಿಸಿಲಿನ ಮಧ್ಯೆಯೂ ರಸ್ತೆಯಲ್ಲಿ ನಿಂತು ತಾವೇ ಸ್ವತಃ ರಸ್ತೆಗುಂಡಿಗಳನ್ನು ಮುಚ್ಚಿಸುವ ಕೆಲಸವನ್ನು ಮಾಡಿಸಿದ್ದಾರೆ. ಇತ್ತೀಚಿಗಷ್ಟೇ ವಿನೋದ್ ರಾಜ್ ಅವರು ಈ ಬೇಸಿಗೆಯಲ್ಲಿ ನೀರು-ಹುಲ್ಲು ಇಲ್ಲದೇ ಹಸುಗಳನ್ನು ಸಾಕಲು ಪರದಾಡುತ್ತಿದ್ದ ರೈತರಿಗೆ ನೆರವಾಗಿದ್ದು, ರೈತರ ಹಸುಗಳಿಗೆ ಹುಲ್ಲು ನೀಡಿದ್ದರು. ಸದ್ಯ ನಟನೆಯಿಂದ ಸಾಕಷ್ಟು ಅಂತರ ಕಾಯ್ದುಕೊಂಡಿರುವ ವಿನೋದ್‌ ರಾಜ್‌ ಅವರು, ಕೆಲವೊಂದು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ತಾಯಿ ಲೀಲಾವತಿ ಅವರ ಅಗಲಿಕೆ ಬಳಿಕ ಮೌನಕ್ಕೆ ಜಾರಿದ್ದ ವಿನೋದ್‌ ರಾಜ್‌, ಇತ್ತೀಚಿಗೆ ಮಹಾನಟಿ ಶೋನಲ್ಲಿ ಭಾಗಿಯಾಗಿವ ಮೂಲಕ ತಮ್ಮ ನೋವು ಮರೆಯುವ ಪ್ರಯತ್ನ ಮಾಡಿದ್ದರು.
                     ವಾಸ್ತವದಲ್ಲಿ ಜನಪರ ಕೆಲಸ ಮಾಡುವುದರಲ್ಲಿ ಇರುವ ಸಂತೋಷ ಇನ್ನಾವ್ಯ ಕೆಲಸ ಮಾಡಿದರೂ ಸಿಗಲು ಅಸಾಧ್ಯ ಎನ್ನುವ ಸಂದೇಶವನ್ನು ನಟ್‌ ವಿನೋಧ್‌ ರಾಜ್‌ ನೀಡಿದ್ದಾರೆ. 
 

Publisher: ಕನ್ನಡ ನಾಡು | Kannada Naadu

Login to Give your comment
Powered by