ಕನ್ನಡ ನಾಡು | Kannada Naadu

ತೆಂಕನಿಡಿಯೂರು 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

03 Dec, 2024

ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡಾನ್ ವರೆಗೆ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅಲ್ಪಸಂಖ್ಯಾತ ಇಲಾಖೆಯ 1 ಕೋಟಿ ಅನುದಾನದ ಕಾಮಗಾರಿ ನಡೆಯುತ್ತಿದ್ದು, ತೆಂಕನಿಡಿಯೂರು ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೂ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಹಂತ ಹಂತವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದ ಮೂಲಕ ರಸ್ತೆ ಸಹಿತ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸದರು.

ಈ ಸಂದರ್ಭದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಅರುಣ್ ಜತ್ತನ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಗಾಯತ್ರಿ, ಶ್ರೀಮತಿ ಮಾಲಿನಿ, ಶ್ರೀಮತಿ ಶಾಲಿನಿ, ಶ್ರೀಮತಿ ಪುಷ್ಪ, ಶ್ರೀಮತಿ ರೇಖಾ, ಶ್ರೀಮತಿ ವಿಕಿತ, ಶ್ರೀಮತಿ ಗೀತಾ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಪಕ್ಷದ ಪ್ರಮುಖರಾದ ಶ್ರೀ ರತ್ನಾಕರ, ಶ್ರೀ ಉಮೇಶ್ ಶೆಟ್ಟಿ, ಶ್ರೀ ಕೃಷ್ಣ ಶೆಟ್ಟಿ, ಶ್ರೀ ರವಿ ಆಚಾರ್ಯ‌,ಶ್ರೀ ಕಿರಣ್ ಪಿಂಟೋ, ಶ್ರೀಮತಿ ಕಾವೇರಿ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

Publisher: ಕನ್ನಡ ನಾಡು | Kannada Naadu

Login to Give your comment
Powered by