ಕನ್ನಡ ನಾಡು | Kannada Naadu

ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಂದ ಭಾಷಣ ರಾಜ್ಯದ ಅಭಿವೃದ್ಧಿ ವೇಗವನ್ನು ಚುರುಕುಗೊಳಿಸಿ, ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ  ಸರ್ಕಾರ ಯಶಸ್ವಿ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

03 Mar, 2025

 

ಬೆಂಗಳೂರು : ರಾಜ್ಯದ ಅಭಿವೃದ್ಧಿ ವೇಗವನ್ನು ಚುರುಕುಗೊಳಿಸುವಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಮಹಾತ್ಮ ಗಾಂಧಿಯವರು ಹೇಳಿದಂತೆ ಕಟ್ಟಕಡೆಯ ವ್ಯಕ್ತಿಗೆ ಯೋಜನೆಗಳನ್ನು  ತಲುಪಿಸುವಲ್ಲಿ ಸರ್ಕಾರ ಬದ್ದವಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಆರಂಭವಾದ ವಿಧಾನಮಂಡಲದ ಅಧಿವೇಶನದ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಕರ್ನಾಟಕ ಮಾದರಿ ಅಭಿವೃದ್ಧಿಯೆಂದರೆ ಜನಕೇಂದ್ರಿತ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಆಡಳಿತವನ್ನು ರೂಪಿಸುವುದು ಎಂದರ್ಥ. ಹಸಿರು ಇಂಧನ, ಮಹಿಳಾ ಸಬಲೀಕರಣ ಮುಂತಾದವುಗಳೂ ಇದರಲ್ಲಿ ಸೇರುತ್ತವೆ. ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ. ಆಕ್ಸ್‍ಫರ್ಡ್ ವಿಶ್ವವಿದ್ಯಾಲಯವು ಹ್ಯೂಮನ್ ರೈಟ್ಸ್ ಹಬ್‍ನ ಬ್ಲಾಗ್‍ನಲ್ಲಿ “ಶೈನಿಂಗ್ ಎ ಲೈಟ್ ಇನ್ ದ ಡಾರ್ಕ್‍ನೆಸ್” ಎಂದು ಮತ್ತು “ಎ ಬ್ಲ್ಯೂ ಪ್ರಿಂಟ್ ಫಾರ್ ದ ವಲ್ರ್ಡ್” ಎಂದು ಈ ಮಾದರಿಯನ್ನು ವ್ಯಾಖ್ಯಾನಿಸಿವೆ. ಈ ಪ್ರಮೇಯದ ಕುರಿತು ತಿಳಿದುಕೊಳ್ಳಲು ವಿಶ್ವ ಸಂಸ್ಥೆಯ ಮುಖ್ಯಸ್ಥರೆ ರಾಜ್ಯಕ್ಕೆ ಬಂದು ನಮ್ಮ ಯೋಜನೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ ಎಂದು ಹೇಳಿದರು.

ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ರಾಜ್ಯದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಪ್ರತಿಯೊಂದು ವಲಯದಲ್ಲೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ  ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಜಿಎಸ್‍ಟಿ ಬೆಳವಣಿಗೆ ದರ ಉತ್ತಮವಾಗಿದೆ.
2024-25ನೇ ಸಾಲಿನ ಬಜೆಟ್‍ನಲ್ಲಿ ಆದೇಶ ಹೊರಡಿಸಬೇಕಾಗಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಘೋಷಣೆ ಮಾಡಿದ್ದ ಕಾರ್ಯಕ್ರಮಗಳೂ ಸಹ ಸಮರ್ಪಕವಾಗಿ ಅನುಷ್ಠಾಣವಾಗುತ್ತಿವೆ. ಇನ್ನುಳಿದ ಘೋಷಣೆಗಳೂಆದೇಶ ಹೊರಡಿಸುವ ಹಂತದಲ್ಲಿವೆ ಎಂದು ತಿಳಿಸಿದರು. 

  

 

ರೈತರ ಆತ್ಮಹತ್ಯೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ :
ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ತೀವ್ರರೂಪದ ಅತಿವೃಷ್ಟಿ ಅನಾವೃಷ್ಟಿಗಳಿಲ್ಲದ ಕಾರಣ ರೈತರ ಕೈಗೆ ಉತ್ತಮ ಫಸಲು ಸಿಕ್ಕಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಂದ ಸುಮಾರು 149 ಲಕ್ಷ ಟನ್ನುಗಳಷ್ಟು ಕೃಷಿ ಉತ್ಪಾದನೆ ನಿರೀಕ್ಷಿಸಲಾಗಿದೆ. ಸರ್ಕಾರವು ತೆಗೆದುಕೊಂಡ ಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ರೈತ ಕುಟುಂಬಗಳಲ್ಲಿ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ನನ್ನ ಸರ್ಕಾರವು ರಚನೆಯಾದಾಗಿಂದಲೂ ತೊಗರಿ ಮತ್ತು ಕೊಬ್ಬರಿಗೆ ಬೆಲೆಗಳು ಕುಸಿದಾಗ ರೈತರ ನೆರವಿಗೆ ನಿಂತು ಪೆÇ್ರೀತ್ಸಾಹ ಧನವನ್ನು ನೀಡಿದೆ. ಕೃಷಿ ಭಾಗ್ಯ ಯೋಜನೆಯನ್ನು ಮುಂದುವರೆಸುವ ಮೂಲಕ ಅಗತ್ಯ ಇರುವ ಕಡೆಗಳಲ್ಲೆಲ್ಲಾ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ಯಾರೆಂಟಿ ಯೋಜನೆಗಳ ಸಮರ್ಪಕ ಜಾರಿ:
ಸಮಾಜವು ಸೋಷಿಯಲ್ ಡಾರ್ವಿನಿಸಂ ಕಡೆಗೆ ಹೋಗಬಾರದೆಂದು ನಮ್ಮ ಹಿರಿಯರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲಕ ಈ ದೇಶಕ್ಕೆ ಅತ್ಯಂತ ಮಾನವೀಯವಾದ ಸಂವಿಧಾನವನ್ನು ಕೊಟ್ಟಿದ್ದಾರೆ. ಸಂವಿಧಾನವು ಅಸಮಾನತೆಯನ್ನು ತಗ್ಗಿಸಿ ಆದಾಯದ ನ್ಯಾಯಯುತ ಪಾಲನ್ನು ಜನರಿಗೆ ಖಾತರಿ ಪಡಿಸಬೇಕೆಂದು ಹೇಳುತ್ತದೆ. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದಕ್ಕಾಗಿ ವರ್ಷಕ್ಕೆ 52 ಸಾವಿರ ಕೋಟಿಗಳಿಗೂ ಹೆಚ್ಚಿನ ಸಂಪನ್ಮೂಲಗಳನ್ನು ಒದಗಿಸುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ 5 ಗ್ಯಾರಂಟಿ ಯೋಜನೆಗಳಿಗಾಗಿ 70000 ಕೋಟಿ ರೂಪಾಯಿಗಳನ್ನು ನೇರವಾಗಿ ಜನರ ಖಾತೆಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು :  
ಶಿಕ್ಷಣ ಕ್ಷೇತ್ರಕ್ಕಾಗಿ ಅಪಾರ ಪ್ರಮಾಣದ ಸಂಪನ್ಮೂಲವನ್ನು ವಿನಿಯೋಗಿಸಲಾಗುತ್ತಿದೆ. ಶಿಕ್ಷಣ ಇಲಾಖೆಯಲ್ಲಿ 13000 ಕ್ಕೂ ಹೆಚ್ಚಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 1088 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಲಾಗಿದೆ. 8,311 ಸಂಖ್ಯೆಯ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ವಿವೇಕ ಯೋಜನೆ ಹಾಗೂ ವಿಶೇಷ ಅನುದಾನದಡಿ 5349 ಶಾಲಾ ಕೊಠಡಿಗಳ ಕಾಮಗಾರಿ ಪೂರ್ಣಗೊಂಡಿವೆ. ಪ್ರಸ್ತುತ 784 ಕೊಠಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. 522 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುತ್ತಿದೆ. ರಾಜ್ಯದ 1953 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಿ ನರ್ಸರಿ ಶಾಲೆಗಳನ್ನು ತೆರೆಯಲಾಗಿದೆ. ಇದ ಅಲ್ಲದೆ, ಮಕ್ಕಳಿಗೆ ರಜಾ ದಿನಗಳನ್ನು ಹೊರತುಪಡಿಸಿ ವಾರದ ಎಲ್ಲಾ ದಿನಗಳಂದು ಸರ್ಕಾರ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್‍ಗಳು ಸೇರಿ ಮೊಟ್ಟೆಯನ್ನು ನೀಡುತ್ತಿವೆ.

ನಿರುದ್ಯೋಗ ಸಮಸ್ಯೆ ನಿವಾರಿಸಲು ಕ್ರಮ :
ಸರ್ಕಾರವು ಇತ್ತೀಚೆಗೆ ತಾನೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿದೆ. ವಿಶ್ವದ 19 ಪ್ರಮುಖ ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವು. ಈ ಸಮ್ಮೇಳನವು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೂಡಿಕೆಯಲ್ಲಿ ಹೊಸ ದಾಖಲೆಯನ್ನೆ ಬರೆದಿದೆ. 10.27 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವನ್ನು ಹೂಡಿಕೆ ಮಾಡಲು ಒಡಂಬಡಿಕೆಗಳಾಗಿವೆ. ಈ ಬಾರಿ ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ವ್ಯಾಪ್ತಿಯಿಂದ ಹೊರಗೆ ಶೇ.75 ಕ್ಕೂ ಹೆಚ್ಚಿನ ಪ್ರಮಾಣದ ಹೂಡಿಕೆ ಒಪ್ಪಂದಗಳಾಗಿವೆ. ಉತ್ತರ ಕರ್ನಾಟಕದಲ್ಲಿ ಶೇ.45ರಷ್ಟು ಹೂಡಿಕೆ ಮಾಡಲು ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ನಿಯಂತ್ರಿಸಲು ನೆರವಾಗುತ್ತದೆ.

ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲೂ ಕರ್ನಾಟಕವು ಇಡೀ ದೇಶದಲ್ಲಿ ಮುಂಚೂಣಿ ರಾಜ್ಯವಾಗಿದೆ. ರಾಜ್ಯವು ತನ್ನ 2024-25 ರ ಬಜೆಟ್‍ನ ಶೇ.15.01ರಷ್ಟು ಸಂಪತ್ತನ್ನು ಬಂಡವಾಳ ವೆಚ್ಚಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಮುಂತಾದ ಪ್ರಗತಿಪರ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸಲು ಸಮಗ್ರ ಹಾಗೂ ಸಮರ್ಥ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದರ ಜೊತೆಯಲ್ಲಿ ಜನರಿಗೆ ಆರೋಗ್ಯ, ಶಿಕ್ಷಣ, ನೈರ್ಮಲ್ಯ ಹಾಗೂ ಸುಸ್ಥಿರ ಕೃಷಿ ವ್ಯವಸ್ಥೆಯುಳ್ಳ ರಾಜ್ಯವನ್ನಾಗಿ ರೂಪಿಸಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದೆ.

ಕಿರು ಸಾಲ ವಸೂಲಾತಿಯ ಕಿರುಕುಳವನ್ನು ತಡೆಯುವ ನಿಟ್ಟಿನಲ್ಲಿ ಶಾಸನಾತ್ಮಕ ಕ್ರಮ :
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಮಾಜದ ಆರ್ಥಿಕ ದುರ್ಬಲ ವರ್ಗದ ಜನತೆಯಿಂದ ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಮತ್ತು ಒತ್ತಡದ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ. ಕರ್ನಾಟಕ ರಾಜ್ಯದಲ್ಲಿ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಮತ್ತು ಒತ್ತಡ ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾದ ಗಂಭೀರ ಕ್ರಮಗಳನ್ನು ಕೈಗೊಳ್ಳಲು, ಕಿರುಕುಳ ನೀಡುವ ವ್ಯಕ್ತಿಗಳಿಗೆ ಕನಿಷ್ಠ 6 ತಿಂಗಳು ಮತ್ತು 10 ವರ್ಷಗಳ ವರೆಗೆ ವಿಸ್ತರಿಸಬಹುದಾದ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ವರೆಗೆ ದಂಡವಿಧಿಸಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆಯನ್ನು ಸರ್ಕಾರ  ಅನುಷ್ಠಾನಗೊಳಿಸಿದೆ. ಕಿರು ಸಾಲ ವಸೂಲಾತಿಯ ಕಿರುಕುಳವನ್ನು ತಡೆಯುವ ನಿಟ್ಟಿನಲ್ಲಿ ಶಾಸನಾತ್ಮಕವಾದ ಕ್ರಮಗಳಿಗೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

 

ತೋಟಗಾರಿಕೆ ಕಿಸಾನ್ ಮಾಲ್ ಸ್ಥಾಪನೆಗೆ ಕ್ರಮ:
ತೋಟಗಾರಿಕೆ ಇಲಾಖೆ ವತಿಯಿಂದ ಬೀಜದಿಂದ ಮಾರುಕಟ್ಟೆಯವರಿಗಿನ ಸೇವೆಗಳನ್ನು ಒಂದೇ ಸೂರಿನಡಿ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಒದಗಿಸಲು “ತೋಟಗಾರಿಕೆ ಕಿಸಾನ್ ಮಾಲ್”ಗಳನ್ನು ಸ್ಥಾಪಿಸಲಾಗುತ್ತಿದೆ. ಈವರೆಗೆ ರೈತರಿಗೆ 15.63ಲಕ್ಷ ಉತ್ತಮ ಗುಣಮಟ್ಟದ ಸಸಿಗಳನ್ನು ವಿತರಿಸಲಾಗಿದೆ. ಅಗತ್ಯವಾದ ಯಂತ್ರೋಪಕರಣಗಳನ್ನು ಸಬ್ಸಿಡಿ ದರದಲ್ಲಿ ಜನರಿಗೆ ನೀಡಲಾಗಿದೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ 16 ವಿವಿಧ ತೋಟಗಾರಿಕಾ ಬೆಳೆಗಳ ತಳಿಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಾಗಿರುತ್ತದೆ. ರಾಜ್ಯದ ರೈತ ಮತ್ತು ರೈತ ಉತ್ಪಾದಕರ ಸಂಸ್ಥೆಯಿಂದ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ “ಝೇಂಕಾರ” ಎಂಬ ಹೆಸರಿನ ವಿಶೇಷ ಬ್ರ್ಯಾಂಡ್ ರೂಪಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಹೊಸ ಕೈಗಾರಿಕ ನೀತಿ ಜಾರಿ :
ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರವನ್ನು ದೇಶದಲ್ಲಿಯೇ ಅಭೂತಪೂರ್ವ ಮಾದರಿಯಲ್ಲಿ ಮುನ್ನಡೆಸುವ ಉದ್ದೇಶದಿಂದ ಹೊಸ ಕರ್ನಾಟಕ ಕೈಗಾರಿಕಾ ನೀತಿ, 2025-30 ಅನ್ನು ಜಾರಿಗೆ ತರಲಾಗಿದೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. 2024-25ನೇ ಸಾಲಿನಲ್ಲಿ ಏಪ್ರಿಲ್ 2024 ರಿಂದ ಸೆಪ್ಟೆಂಬರ್ 2024ರ ಅಂತ್ಯದವರೆಗೆ ರಾಜ್ಯವು 88,853 ಮಿಲಿಯನ್ ಡಾಲರುಗಳಷ್ಟು ಮೌಲ್ಯದ ಸರಕು ಸೇವೆಗಳನ್ನು ರಫ್ತು ಮಾಡುವುದರೊಂದಿಗೆ ಒಟ್ಟಾರೆ ರಫ್ತಿನಲ್ಲಿ 1ನೇ ಸ್ಥಾನದಲ್ಲಿದೆ. 2023-24ಕ್ಕೆ ಹೋಲಿಸಿದರೆ ರಫ್ತಿನಲ್ಲಿ ರಾಜ್ಯವು ಶೇ. 11.17 ರಷ್ಟು ಏರಿಕೆಯ ಪ್ರಗತಿಯನ್ನು ಸಾಧಿಸಿದೆ. ಹೊಸದಾಗಿ ಬೆಂಗಳೂರು ಹೊರವಲಯದಲ್ಲಿ ರೂ.40,000 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಕ್ವಿನ್ ಸಿಟಿ (Knowledge, Wellness and Innovation (KWIN) City) ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದರಿಂದಾಗಿ ಸುಮಾರು 80,000 ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದೆಂದು ಅಂದಾಜಿಸಲಾಗಿದೆ.

ಎಂ.ಎಸ್.ಎಂ.ಇ ವಲಯವು ವ್ಯಾಪಕ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ವಲಯವಾಗಿದೆ. ಈ ವಲಯವು ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ನನ್ನ ಸರ್ಕಾರವು ಈ ವಲಯದ ಅಭಿವೃದ್ಧಿಗಾಗಿ 687 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ.

ಕಲಬುರಗಿಯಲ್ಲಿ ಜವಳಿ ಪಾರ್ಕ್ :
ಕಲಬುರಗಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.51 ಹಾಗೂ ಶೇ.49 ರ ಜಂಟಿ ಸಹಭಾಗಿತ್ವದಲ್ಲಿ 1000 ಎಕರೆ ಜಾಗದಲ್ಲಿ, ಜವಳಿ ಪಾರ್ಕ್ ಸ್ಥಾಪಿಸಲು ಉದ್ದೇಶಿಸಿದೆ. ಈ ಸಂಬಂಧ ವಿವಿಧ ಮೂಲಭೂತ ಕಾಮಗಾರಿಗಳಿಗೆ ರೂ. 390 ಕೋಟಿ ಅನುದಾನವನ್ನು ನೀಡಲು ಸಚಿವ ಸಂಪುಟವು ಅನುಮೋದನೆ ನೀಡಿದೆ. ಇದರಿಂದಾಗಿ 1 ಲಕ್ಷ ನೇರ ಉದ್ಯೋಗಗಳು ಸೃಜನೆಯಾಗಬಹುದೆಂದು ಅಂದಾಜಿಸಲಾಗಿದೆ. ನೇಕಾರ ಸಮ್ಮಾನ್ ಯೋಜನೆಯಡಿ 2024-25ನೇ ಸಾಲಿಗೆ 1,16,189 ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಒಟ್ಟು ರೂ.81 ಕೋಟಿಗಳ ಅನುದಾನ ಹಂಚಿಕೆ ಮಾಡಲಾಗಿದ್ದು, ನೇರ ನಗದು ವರ್ಗಾವಣೆ ಮುಖಾಂತರ ಬಿಡುಗಡೆ ಮಾಡುತ್ತಿದೆ.

ವಿಜಯಪುರದಲ್ಲಿ ವಿಮಾನ ನಿಲ್ದಾಣ :
ರಾಜ್ಯದ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ದೃಷ್ಟಿಯಿಂದ ವಿಜಯಪುರ ಜಿಲ್ಲೆಯಲ್ಲಿ ರೂ.347 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಇದೇ ಸಾಲಿನಲ್ಲಿ ಮುಕ್ತಾಯಗೊಳಿಸಿ ಪ್ರಯಾಣಿಕರಿಗೆ ಸಜ್ಜುಗೊಳಿಸಲಾಗುತ್ತಿದೆ. ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣೆಯನ್ನು ರೂ.319 ಕೋಟಿ ವೆಚ್ಚದಲ್ಲಿ, ರಾಯಚೂರು ವಿಮಾನ ನಿಲ್ದಾಣವನ್ನು ರೂ.219 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಕ್ರಮಕೈಗೊಂಡಿದೆ. ರಾಜ್ಯದ ಧರ್ಮಸ್ಥಳ, ಮಡಿಕೇರಿ ಮತ್ತು ಚಿಕ್ಕಮಗಳೂರಿನಲ್ಲಿ ಏರ್‍ಸ್ಟ್ರಿಪ್‍ಗಳನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸುವ ಮತ್ತು ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಕೆಲಸ ಮಾಡುತ್ತಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 407 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಬೆಂಗಳೂರು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಕಾರವಾರ ನೌಕಾನೆಲೆ ಬಳಿಯ ವಿಮಾನ ನಿಲ್ದಾಣದ ಕಾಮಗಾರಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

“ಜಾಗತಿಕ ತಂತ್ರಜ್ಞಾನ ಕೇಂದ್ರ” ಸ್ಥಾಪನೆಗೆ ಕ್ರಮ:
Center of Excellence in Wired and Wireless Technology ಅನ್ನು 5 ವರ್ಷಗಳ ಅವಧಿಗೆ ರೂ.25 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಸ್ಥಾಪಿಸಲಾಗುತ್ತಿದೆ. ಮೈಸೂರಿನ ಮಂಡಕಳ್ಳಿಯಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ರೂ.30 ಕೋಟಿಗಳ ವೆಚ್ಚದಲ್ಲಿ “ಜಾಗತಿಕ ತಂತ್ರಜ್ಞಾನ ಕೇಂದ್ರ” (Global Technology Center) ವನ್ನು ಸ್ಥಾಪಿಸಲು ಕ್ರಮ ಕೈಗೊಂಡಿದೆ.

ಕರ್ನಾಟಕ ಜಾಗತಿಕ ಸಾಮಥ್ರ್ಯ ಕೇಂದ್ರಗಳ ನೀತಿ ಜಾರಿ:
ರಾಷ್ಟ್ರ ಮಟ್ಟದಲ್ಲಿನ ಜೈವಿಕ ತಂತ್ರಜ್ಞಾನ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು, ಇಂದಿನ ಸ್ಥಿತಿಗತಿಯನ್ನು ಮೌಲ್ಯಮಾಪನ ಮಾಡಿ ಜೈವಿಕ ತಂತ್ರಜ್ಞಾನ ನೀತಿ-4.0 ಅನ್ನು ಪ್ರಕಟಿಸಲಾಗಿದೆ. ಜಾಗತಿಕ ಸಾಮಥ್ರ್ಯ ಕೇಂದ್ರಗಳನ್ನು ರಾಜ್ಯಕ್ಕೆ ಆಹ್ವಾನಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಜಾಗತಿಕ ಸಾಮಥ್ರ್ಯ ಕೇಂದ್ರಗಳ ನೀತಿಯನ್ನು (Karnataka Global Capability Centre Policy-2024) ಪ್ರಕಟಿಸಿದೆ.
ನವೆಂಬರ್ 2024 ರ ದಿನಾಂಕ 19 ರಿಂದ 21 ರವರೆಗೆ ಆಯೋಜಿಸಿದ್ದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ 51 ದೇಶಗಳಿಂದ ಒಟ್ಟಾರೆ 35,000ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಆಕರ್ಷಿಸಲಾಗಿದೆ. ಹೂಡಿಕೆದಾರರ ಸಂಪರ್ಕದಂತಹ ವಿವಿಧ ಉಪಕ್ರಮಗಳ ಮೂಲಕ ನವೋದ್ಯಮಗಳು ಈ ಶೃಂಗಸಭೆಯಲ್ಲಿ ಲಾಭ ಪಡೆದಿವೆ.

 

ಶರಾವತಿ ಪಿಎಸ್ಪಿ ಯೋಜನೆಯ  ಅನುಷ್ಠಾನ  :
ಸರ್ಕಾರವು 2000 ಮೆಗಾವ್ಯಾಟ್ ಸಾಮಥ್ರ್ಯದ ಶರಾವತಿ ಪಿಎಸ್ಪಿ ಯೋಜನೆಯ  ಅನುಷ್ಠಾನಕ್ಕೆ ದಿನಾಂಕ 11.03.2024 ರಂದು ರೂ.8645 ಕೋಟಿಯ ಕಾಮಗಾರಿಗೆ ಕಾರ್ಯಾದೇಶ ನೀಡಿದೆ.
 “ಗೃಹಜ್ಯೋತಿ” ಯೋಜನೆಯಡಿ ಪ್ರಸ್ತುತ 1.62 ಕೋಟಿ ಗ್ರಾಹಕರು ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆಗಸ್ಟ್-2023 ರಿಂದ ಜನವರಿ-2025 ರವರೆಗೆ ಒಟ್ಟಾರೆ 17290 ಕೋಟಿ ರೂಗಳಷ್ಟು ಬೃಹತ್ ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಿಡುಗಡೆ ಮಾಡಲಾಗಿದೆ.
ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ 11.5 ಮೆಗಾವ್ಯಾಟ್ ಸ್ಥಾವರವನ್ನು ವೇಸ್ಟ್ ಟು ಎನರ್ಜಿ ಯೋಜನೆಯಡಿ ಬಿಡದಿಯಲ್ಲಿ ದಿನಾಂಕ:19.12.2024 ರಂದು ಯಶಸ್ವಿಯಾಗಿ ಕಾರ್ಯಾರಂಭಗೊಳಿಸಿದೆ. ರೈತರಿಗೆ ಹಗಲಿನ ವೇಳೆಯಲ್ಲಿ ವಿಶ್ವಾಸಾರ್ಹ ವಿದ್ಯುತ್ ಒದಗಿಸಲು ಮತ್ತು ರೈತರ ಜೀವನ ಶೈಲಿಯನ್ನು ಸುಧಾರಿಸಲು 40,000 ಜಾಲಮುಕ್ತ ಸೌರಪಂಪ್ ಸೆಟ್‍ಗಳಿಗೆ ವಿಕೇಂದ್ರೀಕೃತ ಫೀಡರ್ ಸೌರೀಕರಣಕ್ಕಾಗಿ 2392 ಮೆಗಾ ವ್ಯಾಟ್ ಸಾಮಥ್ರ್ಯದ ಯೋಜನೆಯನ್ನು ಪಿ.ಎಂ. ಕುಸುಮ್ ಯೋಜನೆಯ ಅಡಿಯಲ್ಲಿ ಕೈಗೆತ್ತಿಕೊಂಡಿದೆ.

ಜನರಿಗೆ ಆಹಾರ ಖಾತ್ರಿ ಸಮರ್ಪಕವಾಗಿ ಜಾರಿ :
ರಾಜ್ಯದ ಜನರಿಗೆ ಆಹಾರ ಖಾತ್ರಿಯನ್ನು ಸಮರ್ಪಕಗೊಳಿಸಲು ಸಂವಿಧಾನದ ಮೂಲ ತತ್ವಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಉದ್ದೇಶಿಸಿ 1,28,48,173 ಪಡಿತರ ಚೀಟಿಗಳ ಒಟ್ಟು 4,48,41,976 ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ. ಆಹಾರ ಖಾತ್ರಿ ಯೋಜನೆಯಡಿ 5 ಕೆಜಿ ಧಾನ್ಯಗಳನ್ನು ನೀಡುವುದರ ಜೊತೆಗೆ ರಾಜ್ಯ ಸರ್ಕಾರ ಘೋಷಿಸಿದ್ದ 5 ಕೆಜಿ ಆಹಾರ ಧಾನ್ಯಗಳಿಗೆ ಬದಲಾಗಿ ತಿಂಗಳಿಗೆ ತಲಾ 170 ರೂಗಳಂತೆ ಹಣವನ್ನು ನೇರವಾಗಿ ಅವರ ಖಾತೆಗಳಿಗೆ ವರ್ಗಾಯಿಸುತ್ತಿತ್ತು. ಇದಕ್ಕಾಗಿ ರಾಜ್ಯ ಸರ್ಕಾರವು ಜುಲೈ-2023 ರ ಮಾಹೆಯಿಂದ ಸೆಪ್ಟೆಂಬರ್ -2024ರ ಮಾಹೆಯವರೆಗೆ 10009 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಈ ಹಿಂದೆ ಕೇಂದ್ರ ಸರ್ಕಾರದ ಸಂಸ್ಥೆಗಳು ಅಕ್ಕಿ ಕೊಡುವುದಿಲ್ಲ ಎಂದು ತಿಳಿಸಿದ್ದರಿಂದ ಹಣ ವರ್ಗಾಯಿಸುವ ವ್ಯವಸ್ಥೆ ತಂದಿದ್ದೆವು. ಈಗ ಭಾರತೀಯ ಆಹಾರ ನಿಗಮವು ಅಕ್ಕಿ ಕೊಡಲು ಮುಂದಾಗಿರುವುದರಿಂದ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಲು ಪ್ರಾರಂಭಿಸಲಾಗುತ್ತಿದೆ.

ಜನರ ಆರೋಗ್ಯಕ್ಕಾಗಿ ಹಲವಾರು ಕಾರ್ಯಕ್ರಮಗಳು:
ರಾಜ್ಯದ ಜನರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಯನ್ನು ಪ್ರಾರಂಭಿಸಿ 10.8 ಲಕ್ಷ ಪಿ.ಯು.ಸಿ ವಿದ್ಯಾರ್ಥಿಗಳ ಅನೀಮಿಯ ಪರೀಕ್ಷೆ ಮಾಡಿದಾಗ ಶೇ.32.5 ರಷ್ಟು ಮಕ್ಕಳಲ್ಲಿ ಅನೀಮಿಯ ಇರುವುದು ಕಂಡುಬಂದಿದೆ. ಈ ಮಕ್ಕಳಿಗೆ ರಕ್ತವೃದ್ಧಿ ಚಿಕಿತ್ಸೆ ನೀಡಿದ್ದರಿಂದ ರಕ್ತಹೀನತೆಯುಳ್ಳವರಲ್ಲಿ ಶೇ.60 ರಷ್ಟು ಮಕ್ಕಳು ಗುಣಮುಖರಾಗಿದ್ದಾರೆ. ಎರಡನೆ ಹಂತದಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಅನೀಮಿಯ ಸ್ಥಿತಿಗತಿಗಳ ತಪಾಸಣೆಯನ್ನು ಪ್ರಾರಂಭಿಸಲಾಗುತ್ತಿದೆ. “ಆಶಾ ಕಿರಣ” ಎಂಬ ಯೋಜನೆಯಡಿ 1.4 ಕೋಟಿ ಜನರ ಕಣ್ಣಿನ ತಪಾಸಣೆಗಳನ್ನು ಮಾಡಿ 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. 93,800 ಜನರಿಗೆ ಕಣ್ಣಿನ ಪೆÇರೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಎಂಬ ಯೋಜನೆಯನ್ನು ನಿಮ್ಹಾನ್ಸಿನ ಸಹಯೋಗದೊಂದಿಗೆ ಪ್ರಾರಂಭಿಸಿ 260878 ಜನರಿಗೆ ತಪಾಸಣೆ ಮಾಡಿ 32630 ನರರೋಗಿಗಳಿಗೆ ಚಿಕಿತ್ಸೆ ಮಾಡಲಾಗಿದೆ. ತುರ್ತು ವೈದ್ಯಕೀಯ ಸೇವೆಗಳನ್ನು ನೀಡಲು 108 ಆರೋಗ್ಯ ಕವಚ ತುರ್ತು ಸೇವೆಗಳಿಗೆ 288 ಅಡ್ವಾನ್ಸ್ ಲೈಫ್ ಸಪೋರ್ಟ್ (ಎಎಲ್‍ಎಸ್) ಆಂಬ್ಯುಲೆನ್ಸ್‍ಗಳನ್ನು ಮತ್ತು 39 ಸಂಖ್ಯೆಯ ಬೇಸಿಕ್ ಲೈಫ್ ಸಪೆÇೀರ್ಟ್ (ಬಿಎಲ್‍ಎಸ್) ಆಂಬ್ಯುಲೆನ್ಸ್‍ಗಳನ್ನು ಒದಗಿಸಲಾಗಿದೆ.

ರಾಜ್ಯದಲ್ಲಿ ಕಿಡ್ನಿ ರೋಗಿಗಳಿಗೆ ಉಚಿತವಾಗಿ ನೀಡುವ ಡಯಾಲಿಸಿಸ್ ಕೇಂದ್ರಗಳನ್ನು 192 ರಿಂದ 220 ಕ್ಕೆ ವಿಸ್ತರಿಸಿ 3.67 ಲಕ್ಷ ಡಯಾಲಿಸಿಸ್ ಸೈಕಲ್ ಸೇವೆಗಳನ್ನು ಒದಗಿಸಲಾಗಿದೆ. ರಾಜ್ಯದಲ್ಲಿ 50 ಹಾಸಿಗೆಗಳ ಸಾಮಥ್ರ್ಯದ ತಾಯಿ ಮತ್ತು ಮಕ್ಕಳ 5 ಆಸ್ಪತ್ರೆಗಳನ್ನು ಹಾಗೂ 50 ಹಾಸಿಗೆಗಳ ಸಾಮಥ್ರ್ಯದ 14 ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಮತ್ತು 100 ಹಾಸಿಗೆಗಳ ಸಾಮಥ್ರ್ಯದ ಒಂದು ಕ್ರಿಟಿಕಲ್ ಕೇರ್ ಬ್ಲಾಕ್ ಅನ್ನು ಸ್ಥಾಪಿಸಿದೆ. ಇದರ ಜೊತೆಗೆ 857 ಕೋಟಿ ರೂ. ಅನುದಾನದಲ್ಲಿ ಪಿ.ಹೆಚ್.ಸಿ., ಸಿ.ಹೆಚ್.ಸಿ. ಮತ್ತು ತಾಲ್ಲೂಕು ಆಸ್ಪತ್ರೆಗಳ 88 ಕಾಮಗಾರಿಗಳನ್ನು ಅನುμÁ್ಠನ ಮಾಡಲಾಗುತ್ತಿದೆ. ಜೀವ ಸಾರ್ಥಕತೆ ಸಂಸ್ಥೆಯು 4 ಸರ್ಕಾರಿ ಆಸ್ಪತ್ರೆಗಳನ್ನು ಒಳಗೊಂಡಂತೆ 78 ಆಸ್ಪತ್ರೆಗಳು ಅಂಗಾಂಗ ಕಸಿ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ 344 ಬಿ.ಪಿ.ಎಲ್. ರೋಗಿಗಳಿಗೆ ಸಾಸ್ಟ್ ಯೋಜನೆಯಡಿ ಉಚಿತವಾಗಿ ಅಂಗಾಂಗ ಕಸಿ ಮಾಡಲಾಗಿದೆ. ಇದಕ್ಕಾಗಿ ರಾಷ್ಟ್ರಮಟ್ಟದಲ್ಲಿ 2ನೇ ಅತ್ಯತ್ತಮ ಪ್ರಶಸ್ತಿ ಲಭಿಸಿದೆ. “ಡಾ. ಪುನೀತ್ ರಾಜ್‍ಕುಮಾರ್ ಹೃದಯ ಜ್ಯೋತಿ ಯೋಜನೆ”ಯಲ್ಲಿ ಇಲ್ಲಿಯವರೆಗೆ 416 ಹೃದಯಾಘಾತ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.
ಜನರಿಗೆ ಕೈಗೆಟುಕುವ ಮಾದರಿಯಲ್ಲಿ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮಥ್ರ್ಯ ಆಸ್ಪತ್ರೆಯ ಕಟ್ಟಡವನ್ನು 143 ಕೋಟಿ ರೂ ವೆಚ್ಚದಲ್ಲಿ ಸ್ಥಾಪಿಸಲಾಗಿದ್ದು ಈವರೆಗೆ 15,778 ಒಳರೋಗಿಗಳು ಹಾಗೂ 78,848 ಹೊರರೋಗಿಗಳು ಚಿಕಿತ್ಸೆಯನ್ನು ಪಡೆದಿರುತ್ತಾರೆ. ಜಿಮ್ಸ್ ಕಲಬುರಗಿಯಲ್ಲಿ, ರೂ. 54.80 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಆಸ್ಪತ್ರೆಯನ್ನು ಫೆಬ್ರವರಿ 2024ರಿಂದ ಪ್ರಾರಂಭಿಸಿದ್ದು, ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರೂ. 92 ಕೋಟಿ ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

ಕೆಕೆಆರ್‍ಡಿಬಿ ವತಿಯಿಂದ ಗುಲ್ಬರ್ಗಾದಲ್ಲಿ 371 ಹಾಸಿಗೆ ಸಾಮಥ್ರ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನೆ ಸಂಸ್ಥೆಯನ್ನು ರೂ.304.20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ದಿನಾಂಕ: 22.12.2024 ರಂದು ಲೋಕಾರ್ಪಣೆ ಮಾಡಲಾಗಿದೆ. ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕ್ಯಾಥ್ ಲ್ಯಾಬ್ ಸೌಲಭ್ಯದೊಂದಿಗೆ “ಸೂಪರ್ ಸ್ಪೆಷಾಲಿಟಿ ಕಾರ್ಡಾಯಿಕ್ ಯುನಿಟ್” ಅನ್ನು ರೂ.10 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.

ವಸತಿ ಸಮಸ್ಯೆ ನಿವಾರಣೆಗೆ ಕ್ರಮ :
ಜನರ ವಸತಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ 3.05 ಲಕ್ಷ ಮನೆಗಳನ್ನು 4761.15 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೆರವು ನೀಡಿದೆ. 4096 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಸಿದ್ಧಪಡಿಸುತ್ತಿರುವ 1.23 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮವಹಿಸುತ್ತಿದೆ. ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ 1,66,867 ಕೊಳಚೆ ಪ್ರದೇಶದಲ್ಲಿನ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಆ ಕುಟುಂಬಗಳ ನೆಮ್ಮದಿಯುತ ಜೀವನಕ್ಕೆ ದಾರಿ ಮಾಡಿಕೊಟ್ಟಿದೆ. ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯನ್ನು ಬಿ. ಆರ್ ಅಂಬೇಡ್ಕರ್ ನಿವಾಸ್ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಅನುμÁ್ಠನಗೊಳಿಸಲಾಗುತ್ತಿದೆ. 118359 ಮನೆಗಳ ಫಲಾನುಭವಿಗಳು ಕೇಂದ್ರ ಮತ್ತು ರಾಜ್ಯದ ಸಹಾಯಧನವನ್ನು ಹೊರತುಪಡಿಸಿ 4 ರಿಂದ 5 ಲಕ್ಷಗಳಷ್ಟು ವಂತಿಕೆಯನ್ನು ಪಾವತಿಸಬೇಕಾಗಿತ್ತು. ಆದರೆ ಫಲಾನುಭವಿಗಳು ಕಟ್ಟಲಾಗದ ಸ್ಥಿತಿಯಲ್ಲಿರುವುದನ್ನು ಮನಗಂಡು, ಫಲಾನುಭವಿಗಳು 1 ಲಕ್ಷ ರೂ ಮಾತ್ರ ವಂತಿಕೆಯ ರೂಪದಲ್ಲಿ ನೀಡಿ ಉಳಿಕೆ ಪೂರ್ತಿ ಅನುದಾನವನ್ನು ನನ್ನ ಸರ್ಕಾರವೇ ಪಾವತಿಸುತ್ತಿದೆ. ಈಗಾಗಲೇ 36,789 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. 39,843 ಮನೆಗಳು ಸದ್ಯದಲ್ಲೆ ಲೋಕಾರ್ಪಣೆಗೆ ಸಿದ್ಧವಾಗಿವೆ ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳ ನಿವಾರಣೆ ಕ್ರಮ :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನೆ “ವಿಶೇಷ ಪೋಲೀಸ್ ಠಾಣೆ”ಗಳೆಂದು ಅಧಿಸೂಚನೆ ಹೊರಡಿಸಲು ಕ್ರಮಕೈಗೊಂಡಿದೆ. ಇದಕ್ಕಾಗಿ 450 ಹೊಸ ಹುದ್ದೆಗಳನ್ನು ಸೃಜಿಸಲು ಅನುಮತಿ ನೀಡಲಾಗಿದೆ.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ, 2024-25ರಲ್ಲಿ, ಎಸ್‍ಸಿಎಸ್‍ಪಿ ಅಡಿಯಲ್ಲಿ ರೂ.27674 ಕೋಟಿಗಳು ಮತ್ತು ಟಿಎಸ್‍ಪಿ ಅಡಿಯಲ್ಲಿ ರೂ.11447 ಕೋಟಿಗಳು, ಒಟ್ಟು ರೂ.39121 ಕೋಟಿಗಳನ್ನು ಹಂಚಿಕೆ ಮಾಡಿ ಖರ್ಚು ಮಾಡುತ್ತಿದೆ. 2024-25ರ ಬಜೆಟ್‍ನಲ್ಲಿ ಘೋಷಿಸಿದಂತೆ, 22 ಹೊಸ ವಸತಿ ಶಾಲೆಗಳು ಮತ್ತು 31 ಹಾಸ್ಟೆಲ್‍ಗಳನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸಲು 47 ಹಾಸ್ಟೆಲ್/ವಸತಿ ಶಾಲೆಗಳ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ.

ಗುಣಮಟ್ಟ ಶಿಕ್ಷಣ ನೀಡಿಕೆಗೆ ವಿಶೇಷ ಒತ್ತು :
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಆಯವ್ಯಯ ಘೋಷಣೆಯಂತೆ 150 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿದೆ. ಹಿಂದುಳಿದ ವರ್ಗಗಳ ಜನಾಂಗಗಳ ಸಂಘ-ಸಂಸ್ಥೆಗಳ ಸಮುದಾಯ ಭವನಗಳನ್ನು ನಿರ್ಮಿಸಲು ರೂ.150 ಕೋಟಿಗಳ ಸಹಾಯಧನ ಮಂಜೂರು ಮಾಡಿದೆ. ಹಿಂದುಳಿದ ವರ್ಗಗಳ ಯುವಜನರಿಗೆ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ., ಬ್ಯಾಂಕಿಂಗ್, ಭಾರತೀಯ ಸೇನೆ ಮುಂತಾದ ಪರೀಕ್ಷೆಗಳಿಗೆ ತರಬೇತಿ ನೀಡಲು ಕೊಪ್ಪಳ ಜಿಲ್ಲೆಯ ಕನಕಗಿರಿ ಮತ್ತು ಕಲಬುರಗಿಯಲ್ಲಿ ತರಬೇತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ 250 ಸಂಖ್ಯಾ ಬಲದ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಮತ್ತು 100 ಸಂಖ್ಯಾ ಬಲದ 96 ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಹಾಗೂ 300 ಸಂಖ್ಯಾ ಬಲವುಳ್ಳ 50 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗಿದೆ.

ಮಹಿಳೆಯರ ಸಬಲೀಕರಣಕ್ಕಾಗಿ “ಗೃಹಲಕ್ಷ್ಮಿ” ಯೋಜನೆ :
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡಲಾಗುತ್ತಿದೆ. ಸದರಿ ಯೋಜನೆಯಡಿ 1,26,24,547 ಮಹಿಳಾ ಫಲಾನುಭವಿಗಳು ನೋಂದಣಿಯಾಗಿದ್ದು ಯೋಜನೆ ಪ್ರಾರಂಭವಾದಾಗಿನಿಂದ ಈವರೆಗೆ 36,000 ಕೋಟಿ ರೂಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಈಗಲಿಂಗತ್ವ ಅಲ್ಪ ಸಂಖ್ಯಾತರಿಗೂ ವಿಸ್ತರಿಸಲಾಗಿದೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಪೆÇ್ರೀತ್ಸಾಹಿಸುವ ಮತ್ತು ಲಿಂಗಾನುಪಾತವನ್ನು ಉತ್ತಮಗೊಳಿಸುವ ಉದ್ದೇಶದಿಂದ ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರತಿ ಹೆಣ್ಣು ಮಗುವಿನ ಖಾತೆಗೆ ಪ್ರತಿ ವರ್ಷ ರೂ.3000 ದಂತೆ 15 ವರ್ಷಗಳವರೆಗೆ ಜಮೆ ಮಾಡಲಾಗುತ್ತಿದೆ. 2024-25ನೇ ಸಾಲಿನಲ್ಲಿ, ಇಲ್ಲಿಯವರೆಗೆ 5,59,693 ಫಲಾನುಭವಿಗಳ ಖಾತೆಗೆ 168 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಶಕ್ತಿ ಯೋಜನೆ”ಯು ಮಹಿಳೆಯರನ್ನು ಸಬಲೀಕರಣದ ಕಡೆಗೆ ಮುನ್ನಡೆಸುತ್ತದೆ. ಸದರಿ ಯೋಜನೆ ಪ್ರಾರಂಭವಾದಾಗಿನಿಂದ ದಿನಾಂಕ:17.01.2025ರವರೆಗೆ ರಾಜ್ಯದ ಸುಮಾರು 376.70 ಕೋಟಿ ಫಲಾನುಭವಿಗಳು ಶಕ್ತಿ ಯೋಜನೆಯ ಪ್ರಯೋಜನ ಪಡೆದಿರುತ್ತಾರೆ. ಈ ಉದ್ದೇಶಕ್ಕಾಗಿ ಸರ್ಕಾರ ರೂ.8215 ಕೋಟಿ ಅನುದಾನವನ್ನು ಹಂಚಿಕೆ ಮಾಡಿದೆ.

ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳು :
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 10,01,379 ಫಲಾನುಭವಿಗಳನ್ನು ನೋಂದಾಯಿಸಿ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಡಿ 11.94 ಲಕ್ಷ ಫಲಾನುಭವಿಗಳಿಗೆ ರೂ.702 ಕೋಟಿ ಮೊತ್ತದಷ್ಟು ಸಹಾಯಧನ ಪಾವತಿಸಲಾಗಿದೆ. ರೂ.1515 ಕೋಟಿ ಮೊತ್ತದ ಸುಂಕ ಸಂಗ್ರಹಿಸಲಾಗಿದೆ. 10.63 ಲಕ್ಷ ಫಲಾನುಭವಿಗಳಿಗೆ ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ವೈದ್ಯಕೀಯ ತಪಾಸಣೆ ನಡೆಸಿರುತ್ತದೆ. ಫಲಾನುಭವಿಗಳ ನೋಂದಣಿ ಮತ್ತು ಸೌಲಭ್ಯಗಳನ್ನು ವಿತರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 43 ಕಾರ್ಮಿಕ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿದೆ.

ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ, 221 ಅಪಘಾತ ಪ್ರಕರಣಗಳಲ್ಲಿ ರೂ.10.61 ಕೋಟಿಗಳ “ಅಪಘಾತ ಪರಿಹಾರ”ವನ್ನು ಪಾವತಿಸಲಾಗಿದೆ. ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯಡಿ 25 ವರ್ಗದ 21,89,945 ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸವಲತ್ತು ನೀಡಲಾರಂಭಿಸಿದೆ. ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು “ಕ್ಷೇಮಾಭಿವೃದ್ಧಿ ಮಂಡಳಿ”ಯನ್ನು ರಚಿಸಲಾಗಿದ್ದು, 5,12,135 ಕಾರ್ಮಿಕರನ್ನು ನೋಂದಾಯಿಸಲಾಗಿದೆ.

ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ಕ್ರಮ :
ಬಾಹ್ಯ ನೆರವಿನ ಯೋಜನೆಯಡಿ 7110 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳನ್ನು ರೂ. 5190 ಕೋಟಿಗಳಲ್ಲಿ ಅಭಿವೃದ್ಧಿ ಪಡಿಸಲು ಪ್ರಗತಿಪಥ ಕಾರ್ಯಕ್ರಮವನ್ನು ಅನುμÁ್ಠನಗೊಳಿಸುತ್ತಿದೆ. ಜೊತೆಗೆ 1150 ಕಿ.ಮೀ.ಉದ್ದದ ರಸ್ತೆಗಳನ್ನು “ಕಲ್ಯಾಣಪಥ” ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲು ಉದ್ದೇಶಿಸಿ ಟೆಂಡರ್‍ಗಳನ್ನು ಕರೆಯಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ತಗ್ಗಿಸುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಡಬಲ್ ಡೆಕ್ಕರ್ ಮಾದರಿಯಲ್ಲಿ ಮೆಟ್ರೋ ಮತ್ತು ರಸ್ತೆ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಿದೆ. ಸುಮಾರು 40.50 ಕಿ.ಮೀ. ಸಂಯುಕ್ತ ಮೆಟ್ರೋ ರಸ್ತೆ ಮೇಲ್ಸೇತುವೆ ಯೋಜನೆಯನ್ನು ರೂ.8916 ಕೋಟಿಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ಭಾಗ-1 ರ ಯೋಜನೆಯನ್ನು ಕೈಗೊಳ್ಳಲು ಅಗತ್ಯವಿರುವ ರೂ. 27,000 ಕೋಟಿಗಳನ್ನು ಹುಡ್ಕೋ ಸಂಸ್ಥೆಯಿಂದ ಸಾಲದ ರೂಪದಲ್ಲಿ ಪಡೆಯಲು ನಿರ್ಧರಿಸಿದ್ದು, ಸಾಲದ ಮೊತ್ತಕ್ಕೆ ಭದ್ರತೆ ನೀಡಲಿದೆ. ಕಾಮಗಾರಿಯನ್ನು ಸುಮಾರು 2565 ಎಕರೆ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ. ಸುಮಾರು 73 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

ನೀರಿನ ಸಮಸ್ಯೆ ನಿವಾರಣೆಗೆ ಹಲವಾರು ಕಾರ್ಯಕ್ರಮ :
ಎಡಿಬಿ ಮತ್ತು ಅಮೃತ್ ಯೋಜನೆಯ ಅನುದಾನದಡಿ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣಾ ಹೂಡಿಕೆ ಕಾರ್ಯಕ್ರಮದಡಿ ರೂ.2584 ಕೋಟಿ ವೆಚ್ಚದಲ್ಲಿ ರಾಜ್ಯದ 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಗಳನ್ನು  ಅನುಷ್ಠಾನ ಗೊಳಿಸುತ್ತಿದೆ.
ವಿಶ್ವಬ್ಯಾಂಕ್ ನೆರವಿನ “ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ” ಯಡಿಯಲ್ಲಿ ರೂ.3741 ಕೋಟಿ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ನಗರಗಳ ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶಗಳಲ್ಲಿ ನಿರಂತರ ನೀರು ಸರಬರಾಜು ಪೂರೈಸುವ ಯೋಜನೆಯನ್ನು ಅನುμÁ್ಠನಗೊಳಿಸುತ್ತಿದೆ. ಸದರಿ ಯೋಜನೆಯನ್ನು ಜೂನ್ 2025 ರ ವೇಳೆಗೆ ಅನುμÁ್ಠನಗೊಳಿಸುವ ಗುರಿಯಿದೆ.

ಇ-ಖಾತೆ ನೀಡಲು ಕ್ರಮ :
ನಗರ ಮತ್ತು ಗ್ರಾಮೀಣ ಭಾಗದ ಜನರ ಕ್ರಮಬದ್ಧವಲ್ಲದ ಆಸ್ತಿಗಳಿಗೆ ಇ-ಖಾತಾ ನೀಡಲು ಅತ್ಯಂತ ಜನಪರವಾದ ಯೋಜನೆಯನ್ನು ರೂಪಿಸಿ ಅನುμÁ್ಠನ ಮಾಡುತ್ತಿದೆ. ಪ್ರಾರಂಭದಲ್ಲಿ ಕರ್ನಾಟಕ ಮಹಾನಗರಪಾಲಿಕೆಗಳ ಅಧಿನಿಯಮ ಮತ್ತು ಕರ್ನಾಟಕ ಪೌರಸಭೆಗಳ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು ಬಹುದಿನಗಳಿಂದ ನಗರ ಪಟ್ಟಣ ಪ್ರದೇಶಗಳಲ್ಲಿ ಬಾಕಿ ಉಳಿದಿದ್ದ ಸುಮಾರು 30 ಲಕ್ಷಕ್ಕೂ ಹೆಚ್ಚಿನ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನಮೂನೆ 3ಬಿ ನೀಡಲು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಕ್ಕೂ ಈ ಸೌಲಭ್ಯವನ್ನು ವಿಸ್ತರಿಸಲಾಗುತ್ತದೆ.
ರೈತರ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿಡಲು ಕಂದಾಯ ಇಲಾಖೆಯು ‘ಭೂ ಸುರಕ್ಷಾ’ ಎಂಬ ಗ್ಯಾರಂಟಿಯನ್ನು ನೀಡುತ್ತಿದೆ. ಕಂದಾಯ ಇಲಾಖೆಯಲ್ಲಿನ ಧೀರ್ಘಾವಧಿ ಮತ್ತು ಮುಖ್ಯದಾಖಲೆಗಳನ್ನು ಸ್ಕ್ಯಾನಿಂಗ್, ಡಿಜಿಟಲೀಕರಣ, ಇಂಡೆಕ್ಸಿಂಗ್ ಮತ್ತು ಕೆಟಲಾಗಿಂಗ್ ಮಾಡಿ ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲಾಗುವುದು. ಈಗಾಗಲೇ 9 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಿ ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಲಾಗಿದೆ.

ಕಂದಾಯ ಇಲಾಖೆಯಲ್ಲಿ ಮ್ಯುಟೇಶನ್‍ಗೆ ಸಂಬಂಧಿಸಿದಂತೆ ಜನರು ಅನವಶ್ಯಕವಾಗಿ ಸುತ್ತಾಡುವುದನ್ನು ತಪ್ಪಿಸಲು ಮ್ಯುಟೇಶನ್ ಗ್ಯಾರಂಟಿಯನ್ನು ನೀಡಲಾಗಿದೆ. ಮೊದಲು ಖಾತೆ ಬದಲಾವಣೆಗೆ ಸರಾಸರಿ 32 ದಿನಗಳಷ್ಟುಕಾಲಾವಧಿಬೇಕಾಗಿತ್ತು. ಆಡಳಿತಕ್ಕೆ ಚುರುಕು ಮುಟ್ಟಿಸಿದ ಕಾರಣದಿಂದ ಶೇ.67 ರಷ್ಟು ಖಾತೆ ಬದಲಾವಣೆಗಳು ಕೆಲವೇ ಗಂಟೆಗಳಲ್ಲಿ ಆಗುತ್ತಿವೆ. ಇನ್ನುಳಿದಶೇ.33 ರಷ್ಟುಮ್ಯಟೇಶನ್ನುಗಳನ್ನು 9 ರಿಂದ 13 ದಿನಗಳಲ್ಲಿಮಾಡಲಾಗುತ್ತಿದೆ.
ರಾಜ್ಯದಲ್ಲಿ ನನ್ನ ಭೂಮಿ ಯೋಜನೆಯ ಮುಖಾಂತರ ದರಖಾಸ್ತು ಜಮೀನುಗಳ ಪೆÇೀಡಿ ದುರಸ್ತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹಿಂದಿನ 5 ವರ್ಷಗಳಲ್ಲಿ 5813 ದರಖಾಸ್ತು ಮಂಜೂರಿ ಜಮೀನುಗಳಿಗೆ ಪೆÇೀಡಿ ದುರಸ್ತಿ ಮಾಡಲಾಗಿದ್ದರೆ ನನ್ನ ಭೂಮಿ ಎಂಬ ಯೋಜನೆ ಜಾರಿಗೆ ಬಂದ 2024ರ ಡಿಸೆಂಬರ್‍ನಿಂದ ಇಲ್ಲಿಯವರೆಗೆ 4850ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಮಂಜೂರಾಗಿದ್ದ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗಿದೆ.  ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಇತಿಹಾಸದಲ್ಲಿ ಅಳತೆಯಾಗದೆ ಇದ್ದ ಗ್ರಾಮೀಣ ಜನ ವಸತಿ ಪ್ರದೇಶ/ಗ್ರಾಮಠಾಣದ ಆಸ್ತಿಗಳಿಗೆ ಡ್ರೋಣ್ ಮುಖಾಂತರ ಸರ್ವೆ ಕಾರ್ಯ ಕೈಗೊಳ್ಳಲಾಗುತ್ತಿದೆ.ಈವರೆಗೆ ಒಟ್ಟು 3,880 ಗ್ರಾಮಗಳಿಗೆ 10.05 ಲಕ್ಷ ಕರಡು ಪಿ.ಆರ್. ಕಾರ್ಡ್‍ಗಳನ್ನು ವಿತರಿಸಲಾಗಿದೆ.

ಕನ್ನಡ ಭಾಷೆ ಮತ್ತು ಸಂಸ್ಕøತಿ ಬಲವರ್ಧನೆಗೆ ಕ್ರಮ:
ಕನ್ನಡ ಭಾಷೆ ಮತ್ತು ಸಂಸ್ಕøತಿಯ ವರ್ಧನೆಗಾಗಿ ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕರ್ನಾಟಕ ಸಂಭ್ರಮ-50ರ ಅಂಗವಾಗಿ ದಿನಾಂಕ: 01.11.2024ರಂದು “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಸಮಾರಂಭದಲ್ಲಿ 50 ಪುರುಷ ಮತ್ತು 50 ಮಹಿಳಾ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದಿನಾಂಕ: 27.01.2025 ರಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಾಗಿದೆ. ಕರ್ನಾಟಕದ ಎಲ್ಲಾ ಕಛೇರಿಗಳು, ಅಂಗಡಿ-ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಲು ಕನ್ನಡ ಭಾμÁ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೊಳಿಸಲಾಗಿದೆ. ಮೈಸೂರಿನಲ್ಲಿ “ಸಾಂಸ್ಕøತಿಕ ಮುನ್ನೋಟ ಚಿಂತನಾ ಸಮಾವೇಶ”, ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಗುಡ್ಡಾಪುರದಲ್ಲಿ “ಗಡಿ ನಾಡ ಸಮಾವೇಶ” ಮತ್ತು ರಾಯಚೂರಿನಲ್ಲಿ “ಗೋಕಾಕ್ ಚಳುವಳಿಯ ಹಿನ್ನೋಟ ಮುನ್ನೋಟ” ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸೋದ್ಯಮ ನೀತಿ ಜಾರಿ :
ಕರ್ನಾಟಕ ಸರ್ಕಾರದ ದೃಷ್ಟಿಕೋನವನ್ನು ಸಾಧಿಸುವ ಉದ್ದೇಶದಿಂದ ಪ್ರವಾಸೋದ್ಯಮ ನೀತಿ 2024-2029 ಅನ್ನು ರೂಪಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯನ್ನು ಸುಗಮಗೊಳಿಸಲು ಕಾರ್ಯತಂತ್ರದ ಮಧ್ಯಸ್ಥಿಕೆಗಳು, ಆಕರ್ಷಕ ಪೆÇ್ರೀತ್ಸಾಹಗಳು ಮತ್ತು ಅಗತ್ಯ ನಿಯಂತ್ರಕ ಸುಧಾರಣೆಗಳನ್ನು ನೀತಿಯು ಪ್ರಸ್ತಾಪಿಸುತ್ತದೆ. ಆರಾಮದಾಯಕ ಮತ್ತು ಸುಸ್ಥಿರ ಪ್ರವಾಸೋದ್ಯಮ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವತ್ತ ನಿರಂತರವಾಗಿ ಶ್ರಮಿಸುತ್ತಿರುವ ಈ ನೀತಿಯು ಪ್ರವಾಸಿಗರಿಗೆ ಸುರಕ್ಷಿತ ಮತ್ತು ಉತ್ತಮ-ಗುಣಮಟ್ಟದ ಅನುಭವವನ್ನು ಮತ್ತು ಕರ್ನಾಟಕದ ಜನರಿಗೆ ಹೆಚ್ಚಿನ ಸಮೃದ್ಧಿ ಮತ್ತು ಸಂತೋಷವನ್ನು ಒದಗಿಸುವತ್ತ ಒತ್ತು ನೀಡುತ್ತದೆ.
ಗದಗ ಜಿಲ್ಲೆ ಲಕ್ಕುಂಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಚ್ಯಾವಶೇಷಗಳ ಸಂಗ್ರಹಣಾ ಅಭಿಯಾನದಲ್ಲಿ ಸಂಗ್ರಹಿಸಲಾದ 1000ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಸಾರ್ವಜನಿಕರ ವೀಕ್ಷಣೆ, ಅಧ್ಯಯನ ಮತ್ತು ಸಂಶೋಧನೆಗಾಗಿ ಅಂತರರಾಷ್ಟ್ರೀಯ ಮಟ್ಟದ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲು ಉದ್ದೇಶಿಸಿದೆ.

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಸಕಲ ಸೌಲಭ್ಯಗಳನ್ನು ಒದಗಿಸಲು ದಾಪುಗಾಲನ್ನಿಡಲಾಗಿದೆ. ಈ ಕ್ಷೇತ್ರದಲ್ಲಿ ಭಕ್ತರು ದೇವಿಯ ದರ್ಶನವನ್ನು ಸುಗಮವಾಗಿ ಮಾಡಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಸರದಿ ಸಾಲಿನ ಸಂಕೀರ್ಣವನ್ನು (ಕ್ಯೂ ಕಾಂಪ್ಲೆಕ್ಸ್) ಆದ್ಯತೆಯ ಮೇಲೆ ನಿರ್ಮಾಣ ಮಾಡಲು ಮತ್ತು ಭಕ್ತಾದಿಗಳು ಸ್ವತ: ಅಡುಗೆ ಮಾಡಿಕೊಳ್ಳುವುದರಿಂದ ಅಲ್ಲಿ 500 ಚಿಕ್ಕ ಹೊರವಲಯದ ಅಡುಗೆ ಮನೆಗಳನ್ನು ಮತ್ತು ಗೌರವ ಘಟಕ (ಶೌಚಾಲಯ) ಗಳನ್ನು ನಿರ್ಮಿಸಲು ರೂ.200 ಕೋಟಿಗಳ ಅಂದಾಜು ವೆಚ್ಚದ ಮಾಸ್ಟರ್ ಫ್ಲ್ಯಾನ್ ಸಿದ್ಧಪಡಿಸಲಾಗುತ್ತಿದೆ. ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ರೋಪ್-ವೇ ನಿರ್ಮಾಣ ಮಾಡಲು ಪ್ರಸ್ತಾಪಿಸಲಾಗಿದೆ.

ದೇವಿಕಾ ರಾಣಿ ನಿಕೋಲಾಸ್ರೋರಿಚ್572 ಎಕರೆ ಎಸ್ಟೇಟ್ ಅನ್ನು ಪ್ರವಾಸಿಗರ ಆಕರ್ಷಣೆಗೆ ಮತ್ತು ವಿಶ್ವದರ್ಜೆಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರದ SಂSಅI ಯೋಜನೆಯಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕರ್ನಾಟಕ ಸರ್ಕಾರವು ಸಹ ತನ್ನ ವಿಶೇಷ ಅನುದಾನದ ಮೂಲಕ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುತ್ತದೆ.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಜಾರಿ :
ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ನಿಮಿತ್ತ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು ಬಸ್ ಪಾಸ್ ವಿತರಿಸುವ ಯೋಜನೆಯನ್ನು ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗಿದೆ. ಸರ್ಕಾರವು ತನ್ನ ಪರಿಮಿತ ಆರ್ಥಿಕ ಸಂಪನ್ಮೂಲಗಳ ಆಧಾರದ ಮೇಲೆಯೆ ಇಟ್ಟಿರುವ ಸಾಧನೆಗಳನ್ನು ಮಾಡಿದೆ. ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿದೆ. ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕøತಿಕವೂ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಜನಕಲ್ಯಾಣವನ್ನೆ ಪ್ರಧಾನ ಧ್ಯೇಯವಾಗಿಟ್ಟುಕೊಂಡು ಕೆಲಸ ಮಾಡುತ್ತಿದೆ. ಸರ್ವರ ಶಾಂತಿ, ಸರ್ವರ ಅಭ್ಯುದಯವೇ ಸಂವಿಧಾನದ ಆಶಯ. ಈ ಆಶಯವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ ಎಂದು ತಿಳಿಸಿದರು.

Publisher: ಕನ್ನಡ ನಾಡು | Kannada Naadu

Login to Give your comment
Powered by