ಬೆಂಗಳೂರು : ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕವನ್ನು ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರು ಮಂಡಿಸುತ್ತಾ, ಅಸಹಾಯಕರಿಗೆ ಸಹಾಯ ಮಾಡುವ ಉದ್ದೇಶ ಈ ವಿಧೇಕ ಹೊಂದಿದ್ದು, ಇದರಿಂದ ಸರ್ಕಾರಕ್ಕೆ ಯಾವುದೇ ರೀತಿಯ ಹೊರೆಯಾಗುವುದಿಲ್ಲ ಎಂದು ತಿಳಿಸುತ್ತಾ ವಿಧೇಯಕವನ್ನು ಪರ್ಯಾಲೋಚಿಸಲು ಸದನದಲ್ಲಿ ಕೋರಿದರು.
ವಿಧೇಯಕವು ಸದನದಲ್ಲಿ ಪರ್ಯಾಲೋಚನೆಯಾದ ನಂತರ ಮಾನ್ಯ ಸಭಾಪತಿಗಳು “ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ, 2025ನ್ನು ಅಂಗೀಕರಿಸಿದರು.
Publisher: ಕನ್ನಡ ನಾಡು | Kannada Naadu