ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪ್ರಥsÀಮವಾಗಿ ಚಿತ್ರ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳು ಈ ಮುಖಾಂತರ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕದ ಕಲಾ ಶಾಲೆಗಳಲ್ಲಿ ಯಾವುದೇ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಪೂರ್ವ ಸಿದ್ಧತೆಗಾಗಿ ಏಪ್ರಿಲ್ 30 ರವರೆಗೆ ಕಾಲಾವಕಾಶವನ್ನು ನೀಡಲಾಗುವುದು. ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ತಾವು ರಚಿಸಿರುವ ಕಲಾಕೃತಿಗಳ 2 ಛಾಯಾಚಿತ್ರಗಳನ್ನು ಹಾಗೂ ತಾವು ಅಭ್ಯಾಸ ಮಾಡುತ್ತಿರುವ ಚಿತ್ರ ಕಲಾ ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರದೊಂದಿಗೆ ಅರ್ಜಿ ಕಳುಹಿಸಬೇಕು. ಅರ್ಜಿಗಳನ್ನು www.lalitkala.karnataka.kov.in ಗೂಗಲ್ ಫಾರ್ಮ್ ನಲ್ಲಿ ಭರ್ತಿ ಮಾಡಿ ಅಕಾಡೆಮಿ ಕೋರಿರುವ ಅಗತ್ಯ ದಾಖಲೆಗಳನ್ನು ಆನ್ಲೈನ್ ಮುಖಾಂತರ ಗೂಗಲ್ನಲ್ಲಿ ಲಗತ್ತಿಸುವುದು. ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಂದರ ಪ್ರಕೃತಿಯ ಮಡಿಲಲ್ಲಿ ಚಿತ್ರ ಕಲಾ ಶಿಬಿರವನ್ನು ಏರ್ಪಡಿಸಲಾಗುವುದು. ಶಿಬಿರದಲ್ಲಿ ಅತ್ಯುತ್ತಮ ಚಿತ್ರ ರಚಿಸಿದ ವಿದ್ಯಾರ್ಥಿಗಳಿಗೆ ಕನಿಷ್ಠ 6, ಗರಿಷ್ಠ 10 ವಿದ್ಯಾರ್ಥಿಗಳಿಗೆ ರೂ. 15,000/- ಗಳ ನಗದಿನೊಂದಿಗೆ ಸ್ಮರಣಿಕೆ, ಪ್ರಮಾಣ ಪತ್ರವನ್ನು ಬಹುಮಾನವಾಗಿ ನೀಡಲಾಗುವುದು. ಜೊತೆಗೆ 2025ರ ಉತ್ತಮ ಕಲಾ ವಿದ್ಯಾರ್ಥಿಯೆಂಬ ಗೌರವವನ್ನು ನೀಡಲಾಗುವುದು.
ತಮ್ಮ ಕ್ರಿಯಾಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಈ ಸ್ಪರ್ಧೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬೇಕು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08022480297 ನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher: ಕನ್ನಡ ನಾಡು | Kannada Naadu