ಬೆಂಗಳೂರು : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2025ರ ಏಪ್ರಿಲ್ 4 ರಂದು ರಾಮನಗರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿದೆ.
ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಏಪ್ರಿಲ್ 4 ರಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಭಾರ ಕಾರ್ಯದರ್ಶಿಗಳಾದ ಎ. ದಿನೇಶ್ ಸಂಪತ್ರಾಜ್ ಅವರು ತಿಳಿಸಿದ್ದಾರೆ.
