ಬೆಂಗಳೂರು : ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿ, ಕರ್ನಾಟಕ ಸರ್ಕಾರ, ಬೆಂಗಳೂರು ರವರ ಯೋಜನೆಯಂತೆ ಮತ್ತು ನಾಡೋಜ ಪೆÇ್ರ. ಬರಗೂರು ರಾಮಚಂದ್ರಪ್ಪ ಅವರ ಸಾಂಸ್ಕøತಿಕ ವಿಶ್ವಕೋಶ ರಚನಾ ಸಮಿತಿ ಸಲಹೆಯಂತೆ “ಬಂಜಾರ ಸಾಂಸ್ಕøತಿಕ ವಿಶ್ವಕೋಶ”ವನ್ನು ರಚಿಸಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಗೆ ಪ್ರತಿಕ್ರಿಯಿಸಿದ ಮಾನ್ಯ ಸಚಿವರು ವಿಶ್ವಕೋಶ ರಚನೆಗೆ ತಗಲುವ ಆರಂಭದ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಬಂಜಾರ ಅಕಾಡೆಮಿ ವತಿಯಿಂದ ʻಪ್ರಥಮ ಶ್ರೀ ಸಂತಸೇವಾಲಾಲ್ ಪ್ರಶಸ್ತಿ’ಯನ್ನು ಸ್ಥಾಪಿಸಿದಕ್ಕೆ ಸಮಸ್ತ ಬಂಜಾರ ಸಮುದಾಯದ ಪರವಾಗಿ ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್. ಗೋವಿಂದಸ್ವಾಮಿ ಅವರ ನೇತೃತ್ವದಲ್ಲಿ ಸಚಿವರನ್ನು ಅಭಿನಂದಿಸಲಾಯಿತು.
ನಿಯೋಗದಲ್ಲಿ ಬಂಜಾರ ಸಂಸ್ಕøತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ. ಎ.ಆರ್. ಗೋವಿಂದಸ್ವಾಮಿ, ಹಿರಿಯ ಸಾಂಸ್ಕøತಿಕ ಚಿಂತಕರು ಹಾಗೂ ಭಾಷಾ ತಜ್ಞರಾದ ಡಾ.ಹಂ.ಪ.ನಾಗರಾಜಯ್ಯ, ಬಂಜಾರ ಸಮುದಾಯದ ಹಿರಿಯ ಸಾಹಿತಿ, ಮಾಜಿ ಸಚಿವೆ ಹಾಗೂ ಶ್ರೀ ಸಂತ ಸೇವಾಲಾಲ್ ಪ್ರಶಸ್ತಿ ವಿಜೇತೆ ಡಾ.ಬಿ.ಟಿ.ಲಲಿತಾನಾಯಕ್, ಪರಿಸರ ತಜ್ಞ, ಡಾ.ಡಿ. ಪರಮೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
Publisher: ಕನ್ನಡ ನಾಡು | Kannada Naadu