CreamA Cream article
Article

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಕನ್ನಡ ನಾಡು

 

ನವದಹಲಿ : ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10 ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.
ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8, 2025 ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು.

ಕರ್ನಾಟಕ ಇತಿಹಾಸದಲ್ಲಿ ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲು ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಲೋಕಸಭಾಧ್ಯಕ್ಷರು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು.

Read More