CreamA Cream article
Article

ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆದ್ಯತೆ: ಸಾರಿಗೆ ಬಸ್ ಮತ್ತು ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ನಿಷೇಧ

ಕನ್ನಡ ನಾಡು


ಬೆಂಗಳೂರು: ರಾಜ್ಯದ ಜನಸಾಮಾನ್ಯರ ಜೀವನಾಡಿಯಾಗಿರುವ ಸಾರಿಗೆ ಸಂಸ್ಥೆಯ ಬಸ್‌ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಂಬಾಕು ಉತ್ಪನ್ನಗಳ ಎಲ್ಲಾ ರೀತಿಯ ಜಾಹೀರಾತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರಮುಖಾಂಶಗಳು:

ಸಾರ್ವಜನಿಕ ವಲಯದಲ್ಲಿ ಶ್ಲಾಘನೆ: ಸಾರಿಗೆ ಇಲಾಖೆಯ ಈ ನಿರ್ಧಾರಕ್ಕೆ ಆರೋಗ್ಯ ತಜ್ಞರು ಮತ್ತು ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಮಕ್ಕಳು ಇರುವುದರಿಂದ, ಈ ನಿಷೇಧವು ಅವರ ಮೇಲೆ ಬೀರಬಹುದಾದ ಕೆಟ್ಟ ಪ್ರಭಾವವನ್ನು ತಡೆಯುವಲ್ಲಿ ಸಹಕಾರಿಯಾಗಲಿದೆ.

Read More