Article
ಬಸವರಾಜ ಬೊಮ್ಮಾಯಿಯವರಿಂದ ಕಾಗಿನೆಲೆ ಕನಕ ಗುರುಪೀಠಕ್ಕೆ ಭೇಟಿ
ಕಾಗಿನೆಲೆ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಕನಕ ಗುರುಪೀಠಕ್ಕೆ ಭೇಟಿ ನೀಡಿ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು, ತದನಂತರ ಸಮಾಜದ ಬಂಧುಗಳನ್ನು ಕುರಿತು ಮಾತನಾಡಿದರು. ಈ ಸಂಧರ್ಭದಲ್ಲಿ ರಾಜ್ಯ ಕುರುಬ ಸಮಾಜದ ಅಧ್ಯಕ್ಷರಾದ ಶ್ರೀ ರುದ್ರಣ್ಣ ಗುಳಗುಳಿ ಸೇರಿದಂತೆ ಸಮಾಜದ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
